Breaking News
   
   
   

ಬೆಂಗಳೂರು ಕೊಡವ ಸಮಾಜದದಿಂದ ಎ.ಎಸ್ ಪೊನ್ನಣ್ಣ ರವರನ್ನು ಸಚಿವರನ್ನಾಗಿ ಮಾಡಬೇಕೆಂದು_ ಸರ್ವಾನುಮತದಿಂದ ನಿರ್ಣಯ ಮುಖ್ಯಮಂತ್ರಿಗಳಿಗೆ ನಿರ್ಣಯ ಪ್ರತಿಯೊಂದಿಗೆ ಮನವಿ ಸಲ್ಲಿಸಿದ ಬೆಂಗಳೂರು ಕೊಡವ ಸಮಾಜದ ಪ್ರಮುಖರು

ಕೊಡಗು

news-details

ಬೆಂಗಳೂರು ಕೊಡವ ಸಮಾಜದದಿಂದ ಎ.ಎಸ್ ಪೊನ್ನಣ್ಣ ರವರನ್ನು ಸಚಿವರನ್ನಾಗಿ ಮಾಡಬೇಕೆಂದು_ ಸರ್ವಾನುಮತದಿಂದ ನಿರ್ಣಯ ಮುಖ್ಯಮಂತ್ರಿಗಳಿಗೆ ನಿರ್ಣಯ ಪ್ರತಿಯೊಂದಿಗೆ ಮನವಿ ಸಲ್ಲಿಸಿದ ಬೆಂಗಳೂರು ಕೊಡವ ಸಮಾಜದ ಪ್ರಮುಖರು

ಇಂದು ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರನ್ನು ಅವರ ನಿವಾಸದಲ್ಲಿ ಭೇಟಿಯಾದರು.

     ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ  ಎ.ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು, ಬೆಂಗಳೂರು ಕೊಡವ ಸಮಾಜಕ್ಕೆ ಮಾಡಿಕೊಟ್ಟ ಹಲವು ಅನುಕೂಲಗಳ ಬಗ್ಗೆ ಅಭಿನಂದನಾ ಪೂರ್ವಕವಾಗಿ ಧನ್ಯವಾದಗಳು ಅರ್ಪಿಸಿದರು.

    ಇದೇ ಸಂದರ್ಭದಲ್ಲಿ, ಬೆಂಗಳೂರು ಕೊಡವ ಸಮಾಜದ ಪ್ರಮುಖರು  ಮುಖ್ಯಮಂತ್ರಿಗಳಲ್ಲಿ,  ಎ.ಎಸ್ ಪೊನ್ನಣ್ಣರವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಪ್ರಮುಖ ಖಾತೆಯನ್ನು ನೀಡುವಂತೆ ಸಮಾಜವು ಸರ್ವಾನುಮತದಿಂದ ಕೈಗೊಂಡ ನಿರ್ಣಯ ದೊಂದಿಗೆ ಮನವಿ ಪತ್ರವನ್ನೂ  ಮುಖ್ಯಮಂತ್ರಿಹಾಲಿಗೆ ಸಲ್ಲಿಸಿದರು.

    ಮುಖ್ಯಮಂತ್ರಿಗಳನ್ನು ಉದ್ದೇಶಿಸಿ, ಸೂಕ್ಷ್ಮ ಅಲ್ಪಸಂಖ್ಯಾತ ಜನಸಂಖ್ಯೆಯಾದ ಕೊಡವ ಜನಾಂಗದ ಪ್ರಮುಖ ಹಾಗೂ ಬಲಿಷ್ಠ ಪ್ರತಿನಿಧಿಯಾಗಿರುವ  ಎ.ಎಸ್ ಪೊನ್ನಣ್ಣ ರವರು ಈಗಾಗಲೇ ಮುಖ್ಯಮಂತ್ರಿಗಳ ಕಾನೂನು ಸಲಹಗಾರರಾಗಿ ನಾಡಿನಾದ್ಯಂತ ಹೆಸರು ಮಾಡಿದ್ದು, ಅವರು ಅರ್ಹವಾಗಿ ಸಚಿವ ಸ್ಥಾನಕ್ಕೆ ಯೋಗ್ಯರು ಎಂಬ ಮನವಿಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. 

ಭಾಷಿಕ ಅಲ್ಪಸಂಖ್ಯಾತರೂ ಆಗಿರುವ ಕೊಡುವ ಜನಾಂಗದವರು ಶತಮಾನಗಳಿಂದ ಕ್ರೀಡೆ, ಸೈನ್ಯ ಹಾಗೂ ಇನ್ನಿತರ ಪ್ರಮುಖ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತಾ ಬಂದಿದ್ದು, ತಮ್ಮ ಸಮುದಾಯದ ಪ್ರತಿನಿಧಿಯಾಗಿರುವ  ಪೊನ್ನಣ್ಣರವರಿಗೆ ಪ್ರಮುಖ ಖಾತೆಯನ್ನು ನೀಡಿ ಸಚಿವರನ್ನಾಗಿಸಿ ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

news-details