ಕಳೆದ ಐದು ದಶಕಗಳ ಕಾಲ ರಾಜಕೀಯದಲ್ಲಿದ್ದ ಕಾಂಗ್ರೆಸ್ ನ ನಿಷ್ಟಾವಂತ ನಾಯಕರಾಗಿದ್ದ ರಾಜಕಾರಣಿಯಾಗಿ, ಪ್ರವಾಸೋದ್ಯಮಿಯಾಗಿ, ಕೃಷಿಕರಾಗಿ, ಕಾಫಿ ಉದ್ಯಮಿಯಾಗಿ ಗಮನ ಸೆಳೆದಿದ್ದ ವಿಶೇಷ ವ್ಯಕ್ತಿತ್ವದ ಬೊಟ್ಟೋಳಂಡ ಮಿಟ್ಟು ಚಂಗಪ್ಪ ಅವರು ಇಹಲೋಕ ತ್ಯಜಿಸಿದ್ದಾರೆ. ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮಿಟ್ಟು ಚಂಗಪ್ಪ ಅವರು ವಿಧಿವಶರಾಗಿದ್ದಾರೆ. ಕೆಲ ತಿಂಗಳಿನಿAದ ಅನಾರೋಗ್ಯಕ್ಕೊಳಗಾಗಿ ಮುಳ್ಳುಸೋಗೆ ಮನೆಯಲ್ಲಿಯೇ ವಿಶ್ರಾಂತಿಯಲ್ಲಿದ್ದ ಮಿಟ್ಟು ಚಂಗಪ್ಪ ಅವರನ್ನು ಮಂಗಳವಾರ ರಾತ್ರಿ ಅಮ್ಮತ್ತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಿಟ್ಟು ಚಂಗಪ್ಪ ಅವರು ಗುರುವಾರ ಸಂಜೆ ನಿಧನರಾಗಿದ್ದಾರೆ. ಮಿಟ್ಟು ಚಂಗಪ್ಪ ಅವರು ಪತ್ನಿ ಯಶಿಕಾ, ಪುತ್ರಿಯರಾದ ಕಾವ್ಯ ಮತ್ತು ಕೃತಿಯನ್ನು ಅಗಲಿದ್ದಾರೆ. ಮಿಟ್ಟು ಚಂಗಪ್ಪ ಅವರು ಮಡಿಕೇರಿ ಪುರಸಭೆ, ಎಂ.ಎಲ್.ಸಿ. ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರೂ ರಾಜಕೀಯದಿಂದ ಹತಾಶರಾಗದೇ ಕಿಂಗ್ ಮೇಕರ್ ಆಗಿ ಕಂಗೊಳಿಸಿದ್ದರು. ಭಾರತದ ಪ್ರಧಾನಿಯಾಗಿದ್ದ ದಿವಂಗತ ಇಂದಿರಾಗಾAಧಿ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾಗಿದ್ದ ದಿವಂಗತ ಆರ್. ಗುಂಡೂರಾವ್, ದಿವಂಗತ ಎಸ್.ಎಂ. ಕೃಷ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆಲ್ಲರಿಗೂ ಮಿಟ್ಟು ಚಂಗಪ್ಪ ಅವರು ಆತ್ಮೀಯರಾಗಿದ್ದರು. ವಿನೋದ್ ಶಿವಪ್ಪ ಅವರ ಆತ್ಮೀಯ ಗೆಳೆಯರಾಗಿದ್ದ ಮಿಟ್ಟು ಚಂಗಪ್ಪ ಅವರ ತೋಟದ ಬಂಗಲೆಗೆ ಬರುತ್ತಿದ್ದ ಸೂಪರ್ ಸ್ಟಾರ್ ರಜನೀಕಾಂತ್, ಸಾಹಸ ಸಿಂಹ ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಷ್ ಅವರ ಸ್ನೇಹಿತರೂ ಆಗಿದ್ದರು. ೩೨ ಚುನಾವಣೆಗಳಲ್ಲಿಯೂ ಮತಗಟ್ಟೆಯಲ್ಲಿ ಮೊದಲ ಮತದಾನ ಮಾಡಿ ಮತದಾನ ಜಾಗೃತಿಯ ರಾಯಭಾರಿಯಂತೆ ಮಿಟ್ಟುಚಂಗಪ್ಪ ಅವರು ಗಮನಸೆಳೆದಿದ್ದರು. ಸುಮಾರು ಐದಾರು ದಶಕಗಳಿಂದ ಮಿಟ್ಟು ಚಂಗಪ್ಪ ಅವರ ಕೇಶವಿನ್ಯಾಸ ಮಾಡುತ್ತಿದ್ದ ಮಡಿಕೇರಿಯ ಕುಪ್ಪು ಅಂಡ್ ಸನ್ಸ್ನ ಕುಪ್ಪು ಗಣೇಶ್ ಅವರು ಮಿಟ್ಟುಚಂಗಪ್ಪ ಅವರ ಬಗ್ಗೆ ಹೇಳಿದ್ದು ಹೀಗೆ
ಬೈಟ್-
ಮಡಿಕೇರಿಯ ಮಿಟ್ಟು ಚಂಗಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವ ದಿನೇಶ್ ಗುಂಡೂರಾವ್, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ. ಮಂಥರ್ ಗೌಡ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ, ಡಿಸಿಸಿಯ ಪ್ರಮುಖರು ಮಿಟ್ಟು ಚಂಗಪ್ಪ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಳೆ ಬೆಳಗ್ಗಿನಿಂದಲೇ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಿಟ್ಟು ಚಂಗಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.